Friday, February 4, 2011

೭೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಫೆಬ್ರವರಿ೪ ರಿಂದ ೬ರ ವರೆಗೆ
ಸ್ಥಳ - ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನ


೭೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿಗೆ ಮುಂದೂಡಿಕೆ

ಬೆಂಗಳೂರು, ಡಿಸೆಂಬರ್ ೧೦: ಬೆಂಗಳೂರು ಮಹಾನಗರದ ನ್ಯಾಷನಲ್ ಕಾಲೇಜಿನ ಮೈದಾನದಲ್ಲಿ ಡಿಸೆಂಬರ್ ೨೪ ರಿಂದ ೨೬ ರವರೆಗೆ ಹಮ್ಮಿಕೊಂಡಿದ್ದ ೭೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ೨೦೧೧ ರ ಫೆಬ್ರವರಿ ೪, ೫ ಹಾಗೂ ೬ ರಂದು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ ನಲ್ಲೂರು ಪ್ರಸಾದ್ ಆರ್. ಕೆ. ಅವರು ತಿಳಿಸಿದ್ದಾರೆ.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಸಮ್ಮೇಳನ ಮುಂದೂಡಿಕೆ ಅನಿವಾರ್ಯವಾಯಿತು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಮ್ಮೇಳನದಲ್ಲಿ ಭಾಗವಹಿಸಲಿಚ್ಫಿಸುವ ಪ್ರತಿನಿಧಿಗಳು ಆಯಾ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಲ್ಲಿ ರೂ ೨೫೦/- ಶುಲ್ಕವನ್ನು ೨೦೧೧ ರ ಜನವರಿ ೧೫ ರೊಳಗಾಗಿ ಪಾವತಿ ಮಾಡಿ, ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ಮನವಿ ಮಾಡಿದ್ದಾರೆ.

No comments:

Post a Comment